ಬಂಟ್ವಾಳ, ಫೆ. 14(DaijiworldNews/SM): ದೇವಸ್ಥಾನವನ್ನು ಉಳಿಸಬೇಕಿದ್ದರೆ, ಹಿಂದು ಸಮಾಜ ಉಳಿಯಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಕಾರ್ಯಕ್ರವೊಂದರಲ್ಲಿ ಮಾತನಾಡಿದ ಅವರು, ಹಿಂದುಗಳು ನಾವೆಲ್ಲ ಒಂದು ಎಂದರಷ್ಟೇ ಇದು ಸಾಧ್ಯ. ನಾವು ಅಲ್ಪಸಂಖ್ಯಾತರಾದರೆ, ದೇವಸ್ಥಾನವನ್ನು ರಕ್ಷಿಸುವುದು ಯಾರು ಎಂದು ಪ್ರಶ್ನಿಸಿದರು. ಹಿಂದು ಸಮಾಜಕ್ಕೆ ಆಕ್ರಮಣಗಳು ಎಲ್ಲ ಕಡೆಯಿಂದ ನಡೆಯುತ್ತಿದೆ. ಅವುಗಳನ್ನು ಎದುರಿಸಬೇಕು ಎಂದರು.