ಕಾಸರಗೋಡು, ಫೆ 15 (DaijiworldNews/MS): ಯುವಕನೋರ್ವ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಅಣ೦ಗೂರು ಜೆ. ಪಿ. ಕಾಲನಿಯ ಜ್ಯೋತಿಷ್ (35) ಮೃತಪಟ್ಟವನು. ಫೆ .14 ರ ಇಂದು ಬೆಳಿಗ್ಗೆ ತನ್ನ ಮನೆ ಸಮೀಪದ ಮರವೊಂದರ ರೆಂಬೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಿಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆಯಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಜ್ಯೋತಿಷ್ ಮೇಲೆ ಬಂಗ್ರಗುಡ್ಡೆ ಯ ಸಿನಾನ್, ಸೂರ್ಲು ವಿನ ರಿಷಾದ್ ತಳಂಗರೆಯ ಜೈನುಲ್ ಅಬಿದ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದ ಆರೋಪ ಹೊಂದಿದ್ದು ಬಳಿಕ ಖುಲಾಸೆಗೊಂಡಿದ್ದ. ಜ್ಯೋತಿಷ್ ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಶಲಾಗಿದೆ. ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ .