ಉಡುಪಿ,ಫೆ 16 (DaijiworldNews/KP): ಹಿಜಾಬ್-ಕೇಸರಿ ಶಾಲು ವಿವಾದದಿಂದ ಜಿಲ್ಲೆಯಲ್ಲಿ ಅ ಶಾಂತಿಯ ವಾತಾವರಣ ಸೃಷ್ಟಿ ಮಾಡವ ನಿಟ್ಟಿನಲ್ಲಿ, ಕೆಲ ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ, ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವರಿಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ಶಾಲು ವಿವಾದದಿಂದ ಭಾರತದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವ ನಿಟ್ಟಿನಲ್ಲಿ, ಈ ವಿಚಾರವನ್ನು ದೊಡ್ಡ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೆ 12 ಮುಸ್ಲಿಂ ವಿದ್ಯಾರ್ಥಿನಿಯರನ್ನು ಮುಂದಿಟ್ಟುಕೊಂಡು ಜಿಲ್ಲೆಯಲ್ಲಿ ಕೋಮು ಗಲಭೆ ಮತ್ತು ಮತೀಯಾವಾದ ಸೃಷ್ಟಿಸಿ, ಅ ಶಾಂತಿ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ, ಇಸ್ಲಾಂ ಸಂಘಟನೆಗಳಾದ ಎಸ್.ಡಿ.ಪಿ.ಐ. ಮತ್ತು ಸಿ.ಎಫ್.ಐ. ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇಸ್ಲಾಂ ಸಂಘಟನೆಗಳ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆ.