ಮೂಲ್ಕಿ, ಫೆ 16(DaijiworldNews/MS): ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.16 ರ ಬುಧವಾರ ನಡೆದಿದೆ.
ಮೃತರನ್ನು ಸುಚೇಂದ್ರ ಕುಮಾರ್(39) ಎಂದು ಗುರುತಿಸಲಾಗಿದೆ.
ಸುಚೇಂದ್ರ ಕುಮಾರ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು ಶಿವಮೊಗ್ಗದಲ್ಲಿ ಕೆಲಸ ಮಾಡಿಕೊಂಡಿದ್ದರು. ಇವರ ಪತ್ನಿಯ ಮನೆ ಚೇಳಾಯರುನಲ್ಲಿದೆ. ಬುಧವಾರ ಬೆಳಗ್ಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ಸುಮಾರು 11 ಗಂಟೆಯ ಸುಮಾರಿಗೆ ಸೇತುವೆಯಿಂದ ಹಾರಿದ ಮಾಹಿತಿ ದೊರಕಿ , ಸ್ಥಳಕ್ಕೆ ಧಾವಿಸಿದ ಮೂಲ್ಕಿ ಪೊಲೀಸರು ಸ್ಥಳೀಯರ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821