ಉಡುಪಿ, ಫೆ 16(DaijiworldNews/MS): ಹಿಜಾಬ್ ವಿವಾದದ ಹಿಂದೆ ಷಡ್ಯಂತ್ರ ಅಡಗಿದೆ. ಇದೊಂದು ಜಿಹಾದಿನ ಮುಸಲ್ಮಾನ ಷಡ್ಯಂತ್ರವಾಗಿದ್ದು ವಿದ್ಯಾರ್ಥಿಗಳ ಮೂಲಕ ಶಾಲಾ ಕಾಲೇಜುಗಳನ್ನು ಉಪಯೋಗಿಸುತ್ತಿದ್ದಾರೆ. ಹೀಗಾಗಿ ಎನ್ ಐಎ ತನಿಖೆ ಮಾಡಬೇಕು', ಎಂದು ಸುನಿಲ್ ಕೆ. ಆರ್, ಬಜರಂಗದಳ ಪ್ರಾಂತ ಸಂಯೋಜಕರು ಕರ್ನಾಟಕ ದಕ್ಷಿಣ ಆಗ್ರಹಿಸಿದ್ದಾರೆ.
ಅವರು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ಪ್ರತ್ಯೇಕತಾವಾದವನ್ನು ಬಿಂಬಿಸುವ ಪ್ರಯತ್ನ ಇದಾಗಿದೆ. ಈ ಪ್ರಕರಣ ಹಿಂದೆ PFI , SDPI ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, ಅಲ್ಲದೇ ಇದರ ಹಿಂದೆ ಪಾಕಿಸ್ತಾನ ಇಸ್ಲಾಂ ಮೂಲಭೂತವಾದಿಗಳುಕೈ ಜೋಡಿಸುತ್ತಿರುವುದು ಆತಂಕಕಾರಿಯಾಗಿದೆ'.ಸರಕಾರ ಹೇಳಿದಂತಹ ಸಮವಸ್ತ್ರ ಸಂಹಿತೆಯನ್ನು ಎಲ್ಲರೂ ಪಾಲಿಸಬೇಕು. ಹಿಜಾಬ್ ಬೇಡ, ಶಿಕ್ಷಣ ಬೇಕು ಎಂದಿದ್ದರೆ ಈ ವಿವಾದಗಳೇ ಆಗುತ್ತಿರಲಿಲ್ಲ. ಕುಂದಾಪುರದ ಕಾಲೇಜಿನಲ್ಲಿ ನಡೆದದ್ದು ಪ್ರತಿಕ್ರಿಯೆ ಅಷ್ಟೆ. ವಿವಾದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಕುಗ್ಗಿಸುವಂತಹ ಕೆಲಸವಾಗುತ್ತಿದೆ. ಬಜರಂಗದಳ ನಿರಂತರವಾಗಿ ದೇಶದ ಧರ್ಮದ ಬಗ್ಗೆ ಹೋರಾಟ ಮಾಡುತ್ತಿದ್ದು, ಈ ರೀತಿಯ ದೇಶ ಒಡೆಯುವ ಕೆಲಸವನ್ನು ಮಾಡುವಂತಹ ಜಿಹಾದಿ ಶಕ್ತಿಗಳ ವಿರುದ್ಧ ಯಾವುದೇ ಉಗ್ರ ಹೋರಾಟ ಮಾಡಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಕೋರ್ಟ್ ಕೊಟ್ಟ ತೀರ್ಪನ್ನು ಪಾಲಿಸದೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿರುವುದು ಇವರ ಜಿಹಾದಿ ಮಾನಸಿಕತೆಯನ್ನು ತೋರಿಸುತ್ತಿದೆ. ಈ ದೇಶದ ಕಾನೂನಿಗೆ ಸಂವಿಧಾನಕ್ಕೆ ಮತ್ತು ಈ ದೇಶದ ಸಂಸ್ಕೃತಿ ಸಂಸ್ಕಾರಗಳಿಗೆ ಗೌರವ ಕೊಡಲೇಬೇಕು ಎಂದು ಒತ್ತಾಯಿಸಿದ್ದರೆ.
ಈ ಹಿನ್ನೆಲೆಯಲ್ಲಿ ಈ ಪ್ರಕರಣದ ಹಿಂದೆ ದೇಶ ವಿಭಜನೆಯ ಸಂಚು ಇರುವ ಸಂಶಯ ವ್ಯಕ್ತವಾಗುತ್ತಿದೆ. ಉಡುಪಿ ಕಾಲೇಜಿನಲ್ಲಿ ಹಿಜಾಬ್ ಪ್ರಕರಣವನ್ನು ಪ್ರಾರಂಭಿಸಿದ ಕೆ ವಿದ್ಯಾರ್ಥಿಗಳನ್ನು ಮತ್ತು ಅವರಿಗೆ ಬೆಂಬಲವಾಗಿ ನಿಂತು ಈ ಸಂಚನ್ನೂ ರೂಪಿಸಿದವರ ವಿರುದ್ಧ NIA (ರಾಷ್ಟ್ರೀಯ ತನಿಖಾದಳ), ಮುಖಾಂತರ ತನಿಖೆ ನಡೆಸಬೇಕೆಂದು ಬಜರಂಗದಳ ಆಗ್ರಹಿಸಿದೆ.