ಮಂಗಳೂರು, ಫೆ 16 (DaijiworldNews/KP): ಹಿಜಾಬ್ ಧರಿಸಿದ್ದಕ್ಕಾಗಿ ತರಗತಿಯಲ್ಲಿ ಪ್ರವೇಶ ನಿರಾಕರಿಸಿದ ಹಿನ್ನಲೆಯಲ್ಲಿ ನಗರದ ಎರಡು ಕಾಲೇಜುಗಳ 28 ವಿದ್ಯಾರ್ಥಿಗಳನ್ನು ಮನೆಗೆ ಹಿಂತಿರುಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.
ಹಿಜಾಬ್-ಕೇಸರಿ ವಿವಾದ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಂತಹ ಪದವಿ ಕಾಲೇಜು ಹಾಗೂ ವಿವಿಗಳನ್ನು ಇಂದಿನಿಂದ ಆರಂಭಗೊಂಡಿದೆ. ಅಲ್ಲದೆ ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಕಳೆದ ವಾರ ಧಾರ್ಮಿಕ ವಸ್ತ್ರಗಳನ್ನು ಶಾಲಾ-ಕಾಲೇಜುಗಳಿಗೆ ಧರಿಸುವಂತಿಲ್ಲ ಎಂದು ಮಧ್ಯಂತರ ಆದೇಶದಲ್ಲಿ ತಿಳಿಸಿತ್ತು.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರಿನ ಪೊಲೀಸ್ ಕಮಿಷನರ್ ಶಶಿಕುಮಾರ್, ಎರಡು ಕಾಲೇಜಿನಲ್ಲಿ ಹಿಜಾಬ್ ಧರಿಸಿದ ಬಂದ ವಿಧ್ಯಾರ್ಥಿನಿಯರಿಗೆ ತರಗತಿ ಹಾಜರಾಗಲು ಪ್ರಾಂಶುಪಾಲರು ನಿರಾಕರಿಸಿದ್ದು. ಈ ಹಿನ್ನಲೆ ವಿದ್ಯಾರ್ಥಿಗಳನ್ನು ಮನೆಗೆ ವಾಪಸ್ ಹಿಂತಿರುಗಿದ್ದಾರೆ, ಅಲ್ಲದೆ ನಾಲ್ಕು ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದುಹಾಕಲು ಒಪ್ಪಿದ ನಂತರ ತರಗತಿಗೆ ಅನುಮತಿ ನೀಡಲಾಗಿದೆ ಎಂದು ಹೇಳಿದರು.
ಇನ್ನು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರ ಪರವಾಗಿ ಪೋಷಕರು ಕಾಲೇಜಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಆದರೆ ಕೋರ್ಟ್ ಆದೇಶದಂತೆ ಹಿಜಬ್ ಇಲ್ಲದೆ ತರಗತಿಗೆ ಅವಕಾಶ ಇಲ್ಲ ಎಂದು ಪ್ರಾಂಶುಪಾಲರು ತಿಳಿಸಿದ ಹಿನ್ನಲೆ ಹಿಜಾಬ್ ಇಲ್ಲದೆ ತರಗತಿ ಹಾಜರಾಗುವುದಿಲ್ಲ ಎಂದು ದಯಾನಂದ ಪೈ ಪದವಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮತ್ತು ಪೊಂಪೈ ಕಾಲೇಜಿನ 26 ವಿದ್ಯಾರ್ಥಿನಿಯರು ವಾಪಸ್ ಮನೆಗೆ ತೆರಳಿದ್ದಾರೆ.
ಅಲ್ಲದೆ ಹಿಜಾಬ್ ಧರಿಸಿ ಕಾಲೇಜು ಒಳಗಡೆ ಬಂದಿದ್ದ ಮುಡಿಪು ಕಾಲೇಜಿನ 22 ವಿದ್ಯಾರ್ಥಿಗಳು, ಮೊಂಟೆಪದವು ಪದವೆ ಕಾಲೇಜಿನ 11 ವಿದ್ಯಾರ್ಥಿನಿಯರು, ಮುಲ್ಕಿಯ ಇಂದಿರಾನಗರದ ಪದವಿ ಕಾಲೇಜಿನ 15 ವಿದ್ಯಾರ್ಥಿನಿಯರು, ಹಾಗೂ ಮೂಡಬಿದಿರೆಯ ಮಹಾವೀರ ಪದವಿ ಕಾಲೇಜಿನ 6 ವಿದ್ಯಾರ್ಥಿನಿಯರು ಹಿಜಾಬ್ ನಿರಾಕರಿಸಿದ ಹಿನ್ನಲೆಯಲ್ಲಿ ಹಿಜಾಬ್ ತೆಗೆದು ತರಗತಿಗೆ ಹೋಗಿದ್ದಾರೆ ಎಂದು ತಿಳಿಸಿದರು.
ಇದುವರೆಗೂ ಯಾವುದೇ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿರುವ ಕುರಿತು ಯಾವುದೇ ವರದಿಯಾಗಿಲ್ಲ ಎಂದು ಅವರು ಹೇಳಿದರು.