ಉಡುಪಿ, ಫೆ. 16 (DaijiworldNews/SM): ಉಡುಪಿಯಲ್ಲಿ ಹಿಜಾಬ್ ವಿವಾದ, ಬಳಿಕ ಕೆಲವು ಗೊಂದಲ ಹಿನ್ನೆಲೆ ಹಾಗೂ ಪಾಕಿಸ್ತಾನ ಮಾಧ್ಯಮದಲ್ಲಿ ಸುದ್ದಿ ಪ್ರಸಾರವಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಉನ್ನತ ತನಿಖೆ ನಡೆಸುವಂತೆ ಶಾಸಕ ರಘುಪತಿ ಭಟ್ ಅವರು, ಗೃಹ ಸಚಿವ ಅರಗ ಜ್ಞಾನೇಂದ್ರಗೆ ಪತ್ರ ಬರೆದಿದ್ದಾರೆ.
ಕೆಲವು ಸಂಘಟನೆಗಳು ಕೋಮುವಾದ, ಅಶಾಂತಿ ಸೃಷ್ಟಿಸುತ್ತಿದ್ದಾರೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸುವುದು ಅವಶ್ಯಕತೆ ಇದೆ. 12 ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸಂಘಟನೆಗಳು ಗುಪ್ತ ಸ್ಥಳ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಘಟನೆ ಕುರಿತು ಉನ್ನತ ತನಿಖೆ ನಡೆಸುವಂತೆ ಶಾಸಕ ರಘುಪತಿ ಭಟ್ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.