ಉಳ್ಳಾಲ, ಫೆ.17 (DaijiworldNews/SM): ತೊಕ್ಕೊಟ್ಟಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವಕನೋರ್ವ ಯುವತಿಗೆ ಚುಡಾಯಿಸಿದ ಪ್ರಕರಣ ನಡೆದಿದ್ದು, ಆ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಬಗ್ಗೆ ವರದಿಯಾಗಿದೆ.
ತೊಕ್ಕೊಟ್ಟು ಒಳಪೇಟೆಯ ಸಭಾಂಗಣವೊಂದರಲ್ಲಿ ಮದುವೆ ಸಮಾರಂಭ ನಡೆದಿದ್ದು, ಈ ವೇಳೆ ಯುವಕನೊಬ್ಬ ಯುವತಿಗೆ ಚುಡಾಯಿಸಿದ್ದ ಎನ್ನುವ ಆರೋಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಯುವಕರ ನಡುವೆ ಘರ್ಷಣೆಯುಂಟಾಗಿದೆ. ಈ ವೇಳೆ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಇದನ್ನು ಗಮನಿಸಿದ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.
ಪೊಲೀಸರು ಯುವಕರನ್ನು ವಿಚಾರಿಸಿದ್ದು, ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.