ಮಂಗಳೂರು, ಫೆ.17 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರ್ ಟಿಪಿಸಿ ಚೆಕ್ಕಿಂಗ್ ಬೂತ್ ಗಳು ಹಿಂದೆಗೆದುಕೊಳ್ಳಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಗಡಿಯಲ್ಲಿ ವ್ಯಾಕ್ಸಿನ್ ಪಡೆದಿರುವ ಬಗ್ಗೆ ತಪಾಸಣೆ ನಡೆಸಲಾಗುತ್ತದೆ. ವ್ಯಾಕ್ಸಿನ್ ಪ್ರಮಾಣ ಪತ್ರದ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ವ್ಯಾಕ್ಸಿನ್ ಸರ್ಟಿಫಿಕೆಟ್ ಬಗ್ಗೆ ತಪಾಸಣೆ ಮುಂದುವರಿಕೆ ನಡೆಯಲಿದೆ.
ಸದ್ಯ ೯೦ ಶೇ. ಜನರು ಲಸಿಕೆ ಪಡೆದುಕೊಂಡಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.