ಮಂಗಳೂರು, ಫೆ 18 (DaijiworldNews/HR): ಶುಕ್ರವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ ತಾಲೂಕಿನ ವಿವಿಧ ಕಡೆ ಅಕಾಲಿಕ ಮಳೆಯಾಗಿದ್ದು, ಅಡಿಕೆ ಕೃಷಿಕರು ಕಂಗಲಾಗಿದ್ದಾರೆ.
ಜಿಲ್ಲೆಯಲ್ಲಿ ಕೆಲವು ಪ್ರದೇಶದಲ್ಲಿ ಶುಕ್ರವಾರ ಬೆಳ್ಳಗ್ಗೆ ಅಕಾಲಿಕವಾಗಿ ಮಳೆ ಸುರಿದ್ದು, ಅಡಕೆ ಕೃಷಿಕರ ಅಂಗಳದಲ್ಲಿ ಅಡಕೆ ಒಣಗಲು ಹಾಕಿರುವುದು ಮಳೆಗೆ ಒದ್ದೆಯಾಗಿದ್ದು, ಅಡಿಕೆ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇನ್ನು ಎರಡು ದಿನಗಳ ಹಿಂದೆ ಸುಬ್ರಹ್ಮಣ್ಯ, ಬೆಳ್ಳಾರೆ, ಉಪ್ಪಿನಂಗಡಿ ಸೇರಿದಂತೆ ಕೆಲವು ಕಡೆಗಳಲ್ಲಿಯೂ ಏಕಾಏಕಿ ರಾತ್ರಿ ವೇಳೆ ಮಳೆಯಾಗಿದ್ದು, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದೆ.