ಮಂಗಳೂರು, ಫೆ 21 (DaijiworldNews/HR): ಸುರತ್ಕಲ್ ಟೋಲ್ ಗೇಟ್ ವಿಚಾರವಾಗಿ ನಡೆದ ಹೊಸ ಬೆಳವಣಿಗೆಯೊಂದರಲ್ಲಿ ಪೊಲೀಸರು ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪ್ತಬಾಂಧವನನ್ನು ಸೋಮವಾರ ವಶಕ್ಕೆ ಪಡೆದಿದ್ದಾರೆ.
ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಆಸೀಫ್ ಕಳೆದ ಎರಡು ವಾರಗಳಿಂದ ಸುರತ್ಕಲ್ ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಇದು ಅನಿರ್ದಿಷ್ಟಾವಧಿ ಪ್ರತಿಭಟನೆಯಾಗಿದ್ದು, ಜಿಲ್ಲಾಧಿಕಾರಿ ಇಲ್ಲಿಗೆ ಬಂದು ಜನರನ್ನು ಲೂಟಿ ಮಾಡುತ್ತಿರುವ ಟೋಲ್ ಗೇಟ್ ಅನ್ನು ನೆಲಸಮಗೊಳಿಸುವುದಾಗಿ ಭರವಸೆ ನೀಡುವವರೆಗೂ ಈ ಪ್ರತಿಭಟನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದಿದ್ದರು.
ಇನ್ನು ಪ್ರತಿಭಟನೆಯನ್ನು ಕೈಬಿಡಲು ಆಸೀಫ್ ನಿರಾಕರಿಸಿದ್ದರಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅವರ ವಿರುದ್ಧ ದೂರು ದಾಖಲಿಸಿದ ಆಧಾರದ ಮೇಲೆ ಸೋಮವಾರ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.