ಉಡುಪಿ, ಫೆ. 22 (DaijiworldNews/SM): ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದ ಬಾಲಕಿಯ ತಂದೆಯ ಹೊಟೇಲ್ ಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದು ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.
ಹೊಟೇಲ್ ದಾಳಿ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರನ್ನು ಮಲ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ದೀಪಕ್ ಕುಮಾರ್, ಮನೋಜ್, ಸನಿಲ್ ರಾಜ್ ಬಂಧಿತ ಆರೋಪಿಗಳಾಗಿದ್ದಾರೆ. ದಾಳಿ ಪ್ರಕರಣದಲ್ಲಿ ಮಾಲಕ ಹೈದರ್ ಅಲಿ ಅವರ ಮಗ ಸೈಫ್(೨೦) ಮೇಲೆ ಹಲ್ಲೆ ನಡೆಸಲಾಗಿದ್ದು, ಬಳಿಕ ಹೊಟೇಲ್ ನ ಕಿಟಕಿ ಗಾಜುಗಳನ್ನು ಪುಡಿಗೈಯ್ಯಲಾಗಿದೆ.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.