ಉಳ್ಳಾಲ, ಫೆ. 22 (DaijiworldNews/SM): ಸಾಮಾಜಿಕ ಕಾರ್ಯಕರ್ತ ಯಶು ಪಕಳ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಫೆಬ್ರವರಿ 22ರ ಮಂಗಳವಾರದಂದು ವರದಿಯಾಗಿದೆ.
ತಲಪಾಡಿಯ ದೇವಿನಗರ ಸಮೀಪ ಘಟನೆ ನಡೆದಿದೆ. ತಲಪಾಡಿ ಗ್ರಾ.ಪಂ ಸದಸ್ಯ ಶೈಲೇಶ್ ಮತ್ತು ಎಂಟು ಮಂದಿಯ ತಂಡ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.
ಪ್ರಸ್ತುತ ಹಲ್ಲೆಗೊಳಗಾದ ಪಕಳ ನಾಟೆಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಇನ್ನು ಎಸಿಪಿ ದಿನಕರ್ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.