ಉಡುಪಿ, ಫೆ 23 (DaijiworldNews/HR): ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ನಗರದ ಜೋಡುಕಟ್ಟೆಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆಯಿತು.
ಶಿವಮೊಗ್ಗ ಗಲಭೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಎಚ್ಚೆತ್ತಿರುವ ಪೊಲೀಸರು, ಜನರಿಗೆ ಧೈರ್ಯ ಮೂಡಿಸಲು ಪಥಸಂಚಲನ ನಡೆಸಿದ್ದು, ಇದರಲ್ಲಿ 90 ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿ ಮತ್ತು ಇನ್ನೂರಕ್ಕೂ ಅಧಿಕ ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದಾರೆ.
ಇನ್ನು ಸಂಘಟನೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎಚ್ಚರಿಕೆ ನೀಡಿದ್ದು, ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಪೊಲೀಸ್ ಇಲಾಖೆ ಸಿದ್ಧವಾಗಿದೆ. ಕಾನೂನು ಸುವ್ಯವಸ್ಥೆಗಳ ಬಗ್ಗೆ ಜನರಿಗೆ ಆತಂಕಬೇಡ. ಸಮಾಜದಲ್ಲಿ ಶಾಂತಿ ಕದಡಲು ಪ್ರಯತ್ನ ಪಡುವವರಿಗೆ ಇದೊಂದು ಎಚ್ಚರಿಕೆ. ಸಾಮಾಜಿಕ ಜಾಲತಾಣಗಳನ್ನು ಕೂಡಾ ಮಾನಿಟರ್ ಮಾಡುತ್ತಾ ಇದ್ದೇವೆ. ಯಾರೇ ತಪ್ಪಿತಸ್ಥರು ಇದ್ದರೂ ಅವರ ವಿರುದ್ದ ಕಠಿಣ ಕ್ರಮ ಜರಗಿಸುತ್ತೇವೆ ಎಂದು ಹೇಳಿದ್ದಾರೆ.