ಮಂಗಳೂರು, ಫೆ 24 (DaijiworldNews/HR): ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿದ್ದು, ಇದರಿಂದ ಉಕ್ರೇನ್ ವಿದ್ಯಾಭ್ಯಾಸ ಮಾಡುತ್ತಿರುವ ಬೇರೆ ಬೇರೆ ದೇಶಗಳ ವಿದ್ಯಾರ್ಥಿಗಳ ಮೇಲೂ ಪರಿಣಾಮ ಬೀರಿದ್ದು, ಭಾರತದ ಹಲವಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ನಲ್ಲಿದ್ದು, ಸದ್ಯ ಮಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿ ಸಿಲುಕಿರೋದಾಗಿ ತಿಳಿದು ಬಂದಿದೆ.
ಮಂಗಳೂರಿನ ದೇರೇಬೈಲ್ ನಿವಾಸಿ ಅನೈನಾ ಅನ್ನ ಅವರು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದು, ಉಕ್ರೇನ್ನ ಖಾರ್ಕಿವ್ ನಗರದ ಗಡಿ ಭಾಗದಲ್ಲಿ ನೆಲೆಸಿರೋ ಅನೈನಾ ಮಂಗಳೂರಿನಲ್ಲಿರೋ ತಾಯಿ ಸಂಧ್ಯಾ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ.
ಉಕ್ರೇನ್ ನಲ್ಲಿ ಸಿಲುಕಿರುವ ಮತ್ತೋರ್ವ ಮಂಗಳೂರು ಪಡೀಲು ನಿವಾಸಿ ಕ್ಲಾಟನ್ ಅವರು ಸದ್ಯಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ.
ಇನ್ನು ಉಕ್ರೇನ್ನಲ್ಲಿರುವ ವಿದ್ಯಾರ್ಥಿ ಪೋಷಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ಸಂಪರ್ಕಿಸಿದ್ದು, ಕ್ಲಾಟನ್ ಇರುವ ಕಡೆಯಿಂದ ನೂರಾರು ಕಿಲೋಮೀಟರ್ ದೂರದಲ್ಲಿ ಏರ್ ಬಾಂಬುಗಳು ಅಟ್ಯಾಕ್ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ವಿದ್ಯಾರ್ಥಿ ಮತ್ತು ಮತ್ತೋರ್ವ ವಿದ್ಯಾರ್ಥಿನಿ ಇರುವ ಕಡೆ ಯಾವುದೇ ತೊಂದರೆ ಇಲ್ಲ ಎಂದು ಮಂಗಳೂರು ಮೂಲದ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.