ಉಡುಪಿ, ಫೆ. 25 (DaijiworldNews/SM): ಉಕ್ರೇನ್ ನಲ್ಲಿ ಜಿಲ್ಲೆಯ ಕಲ್ಯಾಣಪುರ ಮೂಲದ ವಿದ್ಯಾರ್ಥಿಯೋರ್ವ ಸಿಲುಕಿಕೊಂಡಿದ್ದು, ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿರುವ ಗ್ಲೆನ್ ವೀಲ್ ಮೆಕ್ಲಿನ್ ಫೆರ್ನಾಂಡೀಸ್ ಸದ್ಯ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾನೆ. ಮೆಕ್ಲಿನ್ ಉಕ್ರೇನ್ ಹೋಗಿ 10 ದಿನವಾಗಿದೆ. ಶಿಕ್ಷಣದ ಹಿನ್ನೆಲೆಯಲ್ಲಿ ಹತ್ತು ದಿನಗಳ ಹಿಂದೆ ಆತ ತೆರಳಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸದ್ಯಕ್ಕೆ ಮಗನನ್ನು ಸೇಫ್ ಬಂಕರ್ ಗೆ ಸಿಫ್ಟ್ ಮಾಡಲಾಗಿದೆ. ಆದ್ರೆ ಅಲ್ಲಿ ಸರಿಯಾದ ಆಹಾರ ಸಿಗುತ್ತಿಲ್ಲ. ಪ್ರತಿ ಅರ್ಧ ಗಂಟೆಗೆ ಒಮ್ಮೆ ವಿಡಿಯೋ ಕಾಲ್ ಮಾಡಿ ನಾವು ಧೈರ್ಯ ತುಂಬುತ್ತಿದ್ದೇವೆ. ಆದರೂ ಯುದ್ದದ ಸ್ಥಿತಿಯನ್ನು ನೋಡಿದಾಗ ನಮಗೆ ಭಯವಾಗುತ್ತಿದೆ. ಸರ್ಕಾರ ಆದಷ್ಟು ಬೇಗ ಎಲ್ಲ ವಿದ್ಯಾರ್ಥಿಗಳನ್ನು ಕರೆ ತರಬೇಕು ಎಂದು ಮೆಕ್ಲಿನ್ ಫೆರ್ನಾಂಡಿಸ್ ತಂದೆ ಮೆಲ್ವಿನ್ ಫೆರ್ನಾಂಡಿಸ್ ದೈಜಿವರ್ಲ್ಡ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.