ಮಂಗಳೂರು, ಮಾ.03 (DaijiworldNews/SM): ಉಕ್ರೇನ್ ನಲ್ಲಿ ರಷ್ಯಾ ದಾಳಿ ತೀವ್ರಗೊಂಡಿದ್ದು, ಇದರಿಂದಾಗಿ ಭಾರತೀಯ ಮೂಲದ ಅನೇಕರು ಸಂಕಷ್ಟದಲ್ಲಿದ್ದಾರೆ. ಅವರ ಏರ್ ಲಿಫ್ಟ್ ಮಾಡುವ ವಿಚಾರದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರದ 4 ಸಚಿವರನ್ನು ಉಕ್ರೇನ್ಗೆ ಕಳುಹಿಸಿಕೊಡಲಾಗಿದೆ. ಇಡೀ ವಿಶ್ವದಲ್ಲೇ ಭಾರತ ಏರ್ಲಿಫ್ಟ್ನಲ್ಲಿ ಪ್ರಥಮ ಸ್ಥಾನದಲ್ಲಿದೆ. ಕಾಂಗ್ರೆಸ್ನ ಪ್ರತಿಪಕ್ಷ ನಾಯಕರ ಹೇಳಿಕೆಯನ್ನು ಖಂಡಿಸುತ್ತೇನೆ. 19,700 ಜನರಲ್ಲಿ 6,000 ಜನರನ್ನು ಕರೆತರಲಾಗಿದೆ. ಮೋದಿ ಈ ಕುರಿತು ಹಲವು ಸುತ್ತಿನ ಸಭೆ ನಡೆಸಿದ್ದಾರೆ ಎಂದು ಮಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ನಾರಾಯಣ್ ಹೇಳಿದ್ದಾರೆ.