ಕುಂದಾಪುರ, ಮಾ.03 (DaijiworldNews/SM): ಪ್ರೇಯಸಿ ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ವಂಡ್ಸೆ ಗ್ರಾಮದಲ್ಲಿ ವರದಿಯಾಗಿದೆ.
ವಂಡ್ಸೆ ಗ್ರಾಮದ ರಿಜ್ವಾನ್(20) ಆತ್ಮಹತ್ಯೆಗೆ ಶರಣಾದ ಯುವಕ. ಗಂಗೊಳ್ಳಿ ನಿವಾಸಿ ಯುವತಿಯೋರ್ವಳನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ, ಇತ್ತೀಚಿಗೆ ಯುವತಿ ಪ್ರೀತಿ ನಿರಾಕರಿಸಿದ್ದಾಳೆ. ಇದರಿಂದಾಗಿ ರಿಜ್ವಾನ್ ಮಾನಸಿಕವಾಗಿ ನೊಂದುಕೊಂಡಿದ್ದ ಎನ್ನಲಾಗಿದೆ.
ಅಲ್ಲದೆ, ಕೆಲಸಕ್ಕೂ ಹೋಗದೆ ಮನೆಯಲ್ಲಿದ್ದ. ಅಲ್ಲದೆ ಆತ್ಮಹತ್ಯೆಗೂ ಪ್ರಯತ್ನಿಸಿದ್ದ. ಬಳಿಕ ಆತ ದುಡಿಯುತ್ತಿದ್ದ ಮಾಲಕನಿಗೆ ವಿಷಯ ತಿಳಿಸಿ ಅವರ ಬಳಿಗೆ ಕಳುಹಿಸಲಾಗಿತ್ತು. ಅಲ್ಲದೆ, ಮಾಲಕರು ಆತನಿಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ, ಬಾಡಿಗೆ ಮನೆಯ ವ್ಯವಸ್ಥೆ ಕಲ್ಪಿಸಿದ್ದರು. ಆದರೆ, ಆತ ಬಾಡಿಗೆ ಮನೆಯಲ್ಲಿ ಇಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.