ಮಂಗಳೂರು, ಮಾ 04 (DaijiworldNews/DB): ಹಿಜಾಬ್ ವಿಚಾರವಾಗಿ ಮಂಗಳೂರಿನ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಶುಕ್ರವಾರ ವಾಗ್ವಾದ ನಡೆಯಿತು.
ಮಂಗಳೂರಿನ ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಆದರೆ ಪೊಲೀಸರು ಸ್ಥಳಕ್ಕಾಗಮಿಸಿ ಕಾಲೇಜು ಆವರಣವನ್ನು ಸುಸ್ಥಿತಿಗೊಳಿಸಿದರು.
ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ತಲೆಯ ಭಾಗಕ್ಕೆ ಬಟ್ಟೆ ಮುಚ್ಚಿಕೊಂಡು ಪರೀಕ್ಷೆ ಬರೆಯಲು ಅನುಮತಿಸಿದ್ದರು. ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆಯಿತು. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಪ್ರಾಂಶುಪಾಲರು ಶಾಂತಿ ಸಭೆಯನ್ನು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.