ಮಂಗಳೂರು, ಮಾ 05 (DaijiworldNNews/HR): ಕಳೆದ ಮೂರು ದಿನಗಳಿಂದ ಹಿಜಾಬ್ ವಿವಾದ ನಡೆಯುತ್ತಿರುವ ನಗರದ ರಥಬೀದಿಯಲ್ಲಿರುವ ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸದ್ಯಕ್ಕೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಸದ್ಯಕ್ಕೆ ಆನ್ಲೈನ್ ತರಗತಿಗಳನ್ನು ನಡೆಸಲಾಗುವುದು ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಿದ್ದಾರೆ.
ತರಗತಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರ ಪ್ರವೇಶ ತಡೆದಿರುವುದಕ್ಕೆ ವಾಗ್ವಾದ ನಡೆದು ಬಳಿಕ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿಯೊಬ್ಬರು ಬಂದರ್ ಠಾಣೆಗೆ ದೂರು ನೀಡಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅನಿರ್ದಿಷ್ಟಾವಧಿ ರಜೆ ಕುರಿತು ವ್ಯವಸ್ಥಾಪಕ ಸಮಿತಿ ವಿದ್ಯಾರ್ಥಿಗಳಿಗೆ ತಿಳಿಸಿದೆ.