ಬಂಟ್ವಾಳ, ಮಾ 05 (DaijiworldNNews/HR): ರೋಟರಿ ಕ್ಲಬ್ ಬಿ.ಸಿ. ರೋಡ್ ಸಿಟಿ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್, ರೋಟರಿ ಕ್ಲಬ್ ಉಪ್ಪಿನಂಗಡಿ ಇವರ ಜಂಟಿ ಆಶ್ರಯದಲ್ಲಿ ಇನ್ಫೋಸಿಸ್ ಸಂಸ್ಥೆಯ ವತಿಯಿಂದ ಶನಿವಾರ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಗೆ 125 ಕಂಪ್ಯೂಟರ್ ಹಸ್ತಾಂತರಿಸಲಾಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಕಂಪ್ಯೂಟರ್ ಹಸ್ತಾಂತರಿಸಿ ಮಾತನಾಡಿ, ಭಾರತದ ಶಿಕ್ಷಣ ಇಂದಿಗೂ ಉತ್ತಮವಾಗಿದೆ. ಸರಕಾರ ವಿದ್ಯೆಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆಶ್ವವೇಗದಲ್ಲಿ ಅಭಿವೃದ್ಧಿ ಪಥದಲ್ಲಿ ಭಾರತ ಸಾಗುತ್ತಿದೆ ಎಂದರು.
ಉಕ್ರೇನ್ - ರಷ್ಯಾ ನಡುವಿನ ಯುದ್ದದ ಈ ಕಾಲಘಟದಲ್ಲು 18 ಸಾವಿರ ವೈದ್ಯ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಾಸ್ ಕರೆತರುವಲ್ಲಿ ಯಶಸ್ವಿಯಾಗಿದೆ. ಎಲ್ಲಾ ವಿಚಾರವನ್ನು ಧನಾತ್ಮಕವಾಗಿ ಚಿಂತನೆಯನ್ನು ಮೈಗೂಡಿಸಿದಾಗ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.
ಅತಿಥಿಯಾಗಿದ್ದ ರಾಜ್ಯ ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ವಿದ್ಯಾರ್ಥಿಗಳಿಗೆ ಅಧ್ಯನಶೀಲತೆ, ಶೃದ್ದೆ ಆತ್ಮವಿಶ್ವಾಸ ಅಗತ್ಯವಿದ್ದು ಸಿಕ್ಕಿದ ಅವಕಾಶವನ್ನು ಬಳಸಿಕೊಂಡು ದೇಶದ ಉತ್ತಮ ಪ್ರಜೆಯಾಗಬೇಕು ಎಂದಿದ್ದಾರೆ.
ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಉಷಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲೆಯ ಸಹಾಯಕ ಗವರ್ನರ್ ಸುರೇಂದ್ರ ಕಿಣಿ, ವಲಯ ಕಾರ್ಯದರ್ಶಿ
ಜಯರಾಮ ರೈ,ವಲಯ ಸೇನಾನಿ ಅವಿಲ್ ಮೆನೇಜಸ್, ರೋಟರಿ ಬಿ.ಸಿ.ರೋಡ್ ಸಿಟಿಯ ಜಿಎಸ್ ಆರ್ ಪದ್ಮನಾಭ ರೈ,ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ನ ರಿಜಿಸ್ಟಾರ್ ಒಫಿಲಿಯಾ ಡಿಸೋಜ,ಉಪ್ಪಿನಂಗಡಿ ರೋಟರಿ ಅಧ್ಯಕ್ಷ ನಿರಾಜ್ ವೇದಿಕೆಯಲ್ಲಿದ್ದರು.
ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಅಧ್ಯಕ್ಷ ಕೆ. ಸತೀಶ್ ಕುಮಾರ್ ಸ್ವಾಗತಿಸಿದರು. ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ಅಧ್ಯಕ್ಷ ರಾಘವೇಂದ್ರ ಭಟ್, ಪ್ರಸ್ತಾವಿಸಿ ವಿದ್ಯಾಸೇತು ಯೋಜನೆಯಡಿ ಇನ್ಪೋಸಿಸ್ ಸಹಯೋಗದಲ್ಲಿ ಕಂಪ್ಯೂಟರ್ ಒದಗಿಸಲಾಗಿದೆ ಪ್ರಧಾನಿ ಮೋದಿಯವರ ಡಿಜಿಟಲ್ ಇಂಡಿಯಾದ ಕನಸು ನನಸಾಗಿಸಲಾಗಿಲು ಪ್ರಸ್ತುತ ಶಿಕ್ಷಣ ವ್ಯವಸ್ಥೆಗೆ ಕಂಪ್ಯೂಟರ್ ನ ಅವಶ್ಯಕತೆ ಇದೆ ಎಂದರು. ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ಕಾರ್ಯ ದರ್ಶಿ ರಮೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಮೋಹನ್. ಎನ್ ವಂದಿಸಿದರು.