ಮಂಗಳೂರು, ಮಾ 08 (DaijiworldNews/DB): ನಗರದ ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ವೇದಿಕೆಯ ಉದ್ಘಾಟನೆಯನ್ನು ಪೂರ್ವತನ ಪ್ರಾಂಶುಪಾಲ ಡಾ. ಹರೀಶ್ ಎ. ಮಂಗಳವಾರ ನೆರವೇರಿಸಿದರು.
ಆಂಗ್ಲ ವಿಭಾಗ ಮುಖ್ಯಸ್ಥೆ ಡಾ. ಎನ್. ಕೆ. ರಾಜಲಕ್ಷ್ಮೀ ಮಾತನಾಡಿ, ಮಹಿಳೆ ಅಥವಾ ಪುರುಷನನ್ನು ಒಂದು ಚೌಕಟ್ಟಿನೊಳಗಿಡುವುದು ಸರಿಯಲ್ಲ. ಮಹಿಳೆ ಸಂತೋಷದ ಸೆಲೆ. ಪ್ರೀತಿಯೇ ಅವಳ ಶಕ್ತಿ ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲತಾ ಎ. ಪಂಡಿತ್ ಮಾತನಾಡಿ, ಕಷ್ಟ ಬಂದಾಗ ಹೆಣ್ಣಿನ ಸಹನೆ, ತಾಳ್ಮೆ ಮುಖ್ಯವಾಗುತ್ತದೆ. ಆಕೆ ತನ್ನ ಕುಟುಂಬಕ್ಕೆ ಆಧಾರವಾಗಬಲ್ಲಳು ಎಂದರು.
ʼಅದೃಷ್ಟಶಾಲಿ ಮಹಿಳೆʼಯರನ್ನು ಅದೃಷ್ಟ ಪರೀಕ್ಷೆಯ ಮೂಲಕ ಆರಿಸಿ ಬಹುಮಾನ ವಿತರಿಸಲಾಯಿತು.
ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಭಾರತಿ ಪ್ರಕಾಶ್ ಹಾಗೂ ಭೌತಶಾಸ್ತ್ರ ವಿಭಾಗದ ಅರುಣಾ ಕುಮಾರಿ ಕಾರ್ಯಕ್ರಮ ಸಂಘಟಿಸಿದರು. ಹಿಂದಿ ವಿಭಾಗ ಮುಖ್ಯಸ್ಥೆ ಡಾ. ನಾಗರತ್ನಾ ಎನ್. ರಾವ್ ವಂದಿಸಿದರು. ಕಾರ್ಯಕ್ರಮದ ಭಾಗವಾಗಿ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು.