ಬೆಳ್ತಂಗಡಿ, ಮಾ 13 (DaijiworldNews/DB): ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಮೃತ್ಯುಂಜಯ ನದಿಗೆ ಸ್ನಾನಕ್ಕೆ ತರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ.
ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ಮೃತಪಟ್ಟವರು. ಮೃತರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.