ಉಡುಪಿ, ಮಾ. 14 (DaijiworldNews/SM): ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಚ್ 15ರ ಮಂಗಳವಾರದಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲೂ ಕೂಡ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಈಗಾಗಲೇ ರಜೆ ಘೋಷಣೆಯಾಗಿದ್ದು, ಉಡುಪಿ ಜಿಲ್ಲೆಯಲ್ಲೂ ಇದೀಗ ರಜೆ ಘೋಷಣೆ ಮಾಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಎಂದು ತಿಳಿದುಬಂದಿದೆ.
ಜಿಲ್ಲೆಯಲ್ಲಿ ಹಿಜಾಬ್ ವಿವಾದ ಆರಂಭಗೊಂಡ ಹಿನ್ನೆಲೆ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯದೆಲ್ಲೆಡೆ ಸದ್ದು ಮಾಡಿರುವ ಕಾರಣದಿಂದಾಗಿ ತೀರ್ಪು ಹೊರ ಬೀಳುವ ದಿನದಂದು ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.