ಮಂಗಳೂರು, ಮಾ 16 (DaijiworldNews/MS): ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ 18 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 75 ಕಡೆ ಭ್ರಷ್ಟಾಚಾರ ನಿಗ್ರಹ ದಳ ಮಾ.16ರ ಬುಧವಾರ ಬೆಳ್ಳಂಬೆಳಗ್ಗೆ ಮೆಗಾ ದಾಳಿ ನಡೆಸಿದೆ.
ರಾಜ್ಯದ ವಿವಿಧೆಡೆ ನಡೆದ ಎಸಿಬಿ ದಾಳಿ
ಮಂಗಳೂರಿನ ಕೆಪಿಟಿಸಿಎಲ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಯಾ ಸುಂದರ್ ರಾಜು ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಎಸಿಬಿ ಶೋಧ ನಡೆಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೋಪಿತ ಅಧಿಕಾರಿಗಳ ಮನೆಗಳು, ಸಂಬಂಧಿಕರು ಮತ್ತು ನಿಕಟವರ್ತಿಗಳ ಮನೆಗಳು, ಸರ್ಕಾರಿ ಕಚೇರಿಗಳು ಮತ್ತು ಖಾಸಗಿ ಕಚೇರಿಗಳಲ್ಲಿ, ವಹಿವಾಟು ಆಸ್ತಿ ಪತ್ರ, ಚಿನ್ನಾಭರಣದ ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿಯ 200ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.