ವಿಟ್ಲ, ಮಾ. 16 (DaijiworldNews/SM): ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನೀರಪಳಿಕೆ ಬಾರೆಬೆಟ್ಟು ಎಂಬಲಿ ಮಹಮ್ಮದ್ ಮುಸ್ತಾಫ್ ಎಂಬವರ ಮನೆಯ ಅಂಗಳದಲ್ಲಿ ಒಣ ಹಾಕಿದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 6 ಮತ್ತು 7ರ ಮಧ್ಯೆ ಯಾರೋ ಕಳ್ಳರು ಸುಮಾರು 3500 ಅಡಿಕೆಯನ್ನು ಕಳ್ಳತನ ಮಾಡಿದ ಬಗ್ಗೆ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಮಂಗಳೂರು ತಾಲೂಕು ಕಣ್ಣೂರು ಗ್ರಾಮದ ಗಾಣದಬೆಟ್ಟು ಎಂಬಲ್ಲಿಯ 4 ಜನ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಈ ಕೃತ್ಯವನ್ನು ಎಸಗಿರುವುದಾಗಿದೆ. ಇವರಿಂದ ಕಳ್ಳತನವಾದ ಸುಮಾರು 3500 ಅಡಿಕೆ ಹಾಗೂ ಪ್ರಕರಣದಲ್ಲಿ ಶಾಮೀಲಾದ 2 ಮೋಟಾರು ಸೈಕಲ್ ಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮಕೈಗೊಳ್ಳಲಾಗಿದೆ.