ಸುಳ್ಯ, ಮಾ 17 (DaijiworldNews/HR): ಕೆಎಸ್ಆರ್ಟಿಸಿ ಬಸ್ ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿ ಬಿದ್ದು 21 ಮಂದಿ ಗಾಯಗೊಂಡಿರುವ ಘಟನೆ ಸಂಪಾಜೆ ಗಡಿಕಲ್ಲು ಬಳಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಅಪಘಾತಗೊಂಡು 21 ಮಂದಿ ಗಾಯಗೊಂಡಿದ್ದು ಅವರಲ್ಲಿ ನಾಲ್ಕು ಮಂದಿ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ 17 ಮಂದಿಯನ್ನು ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ.
ಮೈಸೂರು ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ ಸಂಪಾಜೆ ಗಡಿಕಲ್ಲು ಬಳಿ ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ.
ಇನ್ನು ಸಾರ್ವಜನಿಕರು, ಸ್ಥಳೀಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.