ಉಡುಪಿ, ಮಾ.17 (DaijiworldNews/SM): ಮಲ್ಪೆಯ ಬೈಲಕೆರೆ ಪರಿಸರದಲ್ಲಿ ಗೋಡೆಬರಹ ಪತ್ತೆಯಾಗಿದೆ. ಹಿಜಾಬ್ ಪರವಾಗಿ ಕಿಡಿಗೇಡಿಗಳು ಗೋಡೆಬರಹ ಬರೆದಿದ್ದಾರೆ. ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಗೋಡೆ ಬರಹ ಪ್ರಕಟವಾಗಿದೆ.
ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಬರಹ ಕಂಡುಬಂದಿದೆ. "ಹಿಜಾಬ್ ಮೂವ್ ಮೆಂಟ್", "ಹಿಜಾಬ್ ಈಸ್ ಅವರ್ ರೈಟ್" ಎಂಬ ಗೋಡೆ ಬರಹ ಪತ್ತೆಯಾಗಿದೆ. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಯುವಕರು ಜಮಾಯಿಸಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವವರನ್ನು ಬಂಧಿಸುವಂತೆ ಆಗ್ರಹ ಮಾಡಿದ್ದಾರೆ.
ಸ್ಥಳಕ್ಕೆ ವೃತ್ತನಿರೀಕ್ಷಕ ಶರಣಬಸವ ಪಾಟೀಲ್ ಭೇಟಿ ನೀಡಿದ್ದು, ಯುವಕರ ಮನವೊಲಿಕೆ ಕಾರ್ಯ ಮಾಡಿದ್ದಾರೆ.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.