ಬೆಳ್ತಂಗಡಿ, ಮಾ. 18(DaijiworldNews/SM): ಕೆಎಸ್ ಆರ್ ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರ್ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಗರ್ಡಾಡಿ ಸಮೀಪದ ನಂದಿಬೆಟ್ಟ ಬಳಿ ಸಂಭವಿಸಿದೆ.
ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ ಸಿರಾಜ್ ಮತ್ತು ಕುತುಬುದ್ದೀನ್ ಸಾದಿಕ್ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.