ಮಂಗಳೂರು, ಮೇ 15 (DaijiworldNews/HR): ರಾಜ್ಯದಲ್ಲಿ ಲೌಡ್ ಸ್ಪೀಕರ್ ನಿಯಂತ್ರಣ ವಿಚಾರವಾಗಿ ಸರ್ಕಾರ ಆದೇಶ ಹೊರಡಿಸಿದ್ದು, ಇದರಿಂದ ಯಕ್ಷಗಾನ ಕಲಾವಿದರಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ಕಲಾವಿದರ ದೃಷ್ಟಿಯಿಂದ ಯಕ್ಷಗಾನಕ್ಕೆ ರಿಯಾಯಿತಿ ನೀಡಬೇಕು ಎಂದು ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಯಕ್ಷಗಾನಕ್ಕೆ ಯಾವುದೇ ಧರ್ಮದ ತಡೆಯಿಲ್ಲ. ಎಲ್ಲಾ ಧರ್ಮದವರು ಯಕ್ಷಗಾನವನ್ನು ಆಡಿಸುತ್ತಾರೆ. ಸರ್ಕಾರದ ಸೌಂಡ್ ಡಿಸಿಬಲ್ ನೀತಿಯಡಿ ಯಕ್ಷಗಾನ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ.
ಇನ್ನು ಯಕ್ಷಗಾನ ಶೇ 99ರಷ್ಟು ರಾತ್ರಿ ಯಿಂದ ಮುಂಜಾನೆಯವರೆಗೆ ನಡೆಯುತ್ತದೆ. ಸರ್ಕಾರ ಕಲಾವಿದರ ದೃಷ್ಟಿಯಿಂದ ಯಕ್ಷಗಾನಕ್ಕೆ ರಿಯಾಯಿತಿ ನೀಡಬೇಕು ಎಂದು ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ಯಕ್ಷಗಾನ ಮೇಳದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.