ಪುತ್ತೂರು, ಮೇ 17 (DaijiworldNews/MS): ಬಲ್ನಾಡಿನಿಂದ ಕೆಲಸದ ನಿಮಿತ್ತ ಕಡಬಕ್ಕೆ ಹೋಗುತ್ತಿದ್ದ ಯುವತಿಯನ್ನು ಆಕೆಯ ಮನೆಯ ಸಮೀಪದಿಂದ ಕಿಡ್ನಾಪ್ ಮಾಡಲಾಗಿದೆ ಎಂದು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಆರು ಜನರ ವಿರುದ್ಧ ದೂರು ದಾಖಲಾಗಿದೆ. ಸಂತ್ರಸ್ತ ಯುವತಿ ಮೇ 10 ರಂದು ತನ್ನ ಮನೆಯಿಂದ ಕಚೇರಿಗೆ ಹೋಗುತ್ತಿದ್ದ ಸಂದರ್ಭ ಯಾರೋ ಅಪರಿಚಿತರು ಆಕೆಯನ್ನು ಬಲವಂತವಾಗಿ ಅಪಹರಿಸಿ ಕಾರಿನಲ್ಲಿ ಕೂರಿಸಿ ಸ್ಥಳೀಯ ಇಬ್ಬರ ಮನೆಗೆ ಕರೆದೊಯ್ದು ಮಾದಕ ದ್ರವ್ಯ ಸೇವಿಸುವಂತೆ ಮಾಡಿದ್ದಾರೆ. ಬಳಿಕ ಯುವತಿಯನ್ನು ಕೇರಳದ ಕಣ್ಣೂರಿಗೆ ಕರೆದೊಯ್ದಿದ್ದಾರೆ.
ತನ್ನನ್ನು ದುರುದ್ದೇಶದಿಂದ ಅಪಹರಿಸಿ, ಮೈ ಮುಟ್ಟಿ, ಥಳಿಸಿದ ಆರು ಜನರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.