ಪುತ್ತೂರು, ಮೇ 17 (DaijiworldNews/SM): ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸರಕಾರ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿಕೆ ನೀಡಿದ್ದು, ಇಂಧನ ಸಚಿವ ಸುನಿಲ್ ಕುಮಾರ್ ಅವರು ಇದಕ್ಕೆ ತಿರುಗೇಟು ನೀಡಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರಕಾರ ಇದ್ದ ಸಂದರ್ಭದಲ್ಲಿ ಸರಕಾರ ಪ್ರಯೋಜಿತ ಹತ್ಯೆಗಳು ನಡೆದಿವೆ. ಉಡುಪಿ, ಕೊಡಗು ಮತ್ತು ಉತ್ತರಕನ್ನಡದಲ್ಲಿ ನಿರ್ದಿಷ್ಟ ಸಮುದಾಯ ಮತ್ತು ಸಂಘಟನೆಗಳನ್ನು ಗುರಿಯಾಗಿಸಿ ಹತ್ಯೆ ನಡೆದಿದೆ. ಕಳೆದ 4 ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇಂಥ ಘಟನೆಗಳಿಗೆ ಕಡಿವಾಣ ಹಾಕಲಾಗಿದೆ.
ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಿಂದೂ ಯುವಕನ ಹತ್ಯೆಯಾಗಿತ್ತು. ಮಂಗಳೂರಿನಲ್ಲಿ ಇದ್ದರೂ ಮುಖ್ಯಮಂತ್ರಿಗಳು ಹತ್ಯೆಯಾದ ಯುವಕನ ಮನೆಗೆ ಹೋಗಿ ಭೇಟಿಯಾಗಿಲ್ಲ. ತಾಲೀಬಾನ್ ಸಂಸ್ಕತಿಯ ಬಗ್ಗೆ ಮಾತನಾಡುವ ಯು.ಟಿ. ಖಾದರ್ ಜಿಲ್ಲೆಯ ಶಾಂತಿ ಕದಡಲು ಎಷ್ಟು ಕೊಡುಗೆ ನೀಡಿದ್ದಾರೆ ಎನ್ನುವುದು ಜನತೆಗೆ ಗೊತ್ತಿದೆ. ಕಾಂಗ್ರೇಸ್ ನ ಸರಕಾರಿ ಪ್ರಯೋಜಿತ ಹತ್ಯೆ ನಡೆದಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.