ಪುತ್ತೂರು, ಮೇ 21 (DaijiworldNews/HR): ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಕನಸು ಕಾಣೋದು ತಪ್ಪಲ್ಲ. ಆದರೆ ಅವರಿಗೆ ಕನಸು ಬೀಳೋದು ತಪ್ಪು ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯಸಭೆ ಅಭ್ಯರ್ಥಿಗಳ ಪ್ರಕಟನೆ ನಾಳೆ ಆಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಕ್ಷದ ಕಾರ್ಯಕ್ರಮದ ಹಿನ್ನಲೆಯಲ್ಲಿ ಗುಜರಾತ್ ನಲ್ಲಿದ್ದಾರೆ. ಗುಜರಾತ್ ಕಾರ್ಯಕ್ರಮ ಇಂದು ಮುಗಿಯುವ ಸಾಧ್ಯತೆಯಿದ್ದು, ಆ ಬಳಿಕ ಪಕ್ಷದ ಹಿರಿಯರು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದರು.
ಇನ್ನು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೇಸ್ ಗೆ ಹಿನ್ನಡೆಯಾಗಲಿದೆ ಎನ್ನುವ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅಭಿಪ್ರಾಯ. ಕಾಂಗ್ರೆಸ್ ನ ಇಡೀ ಸಂಗತಿಗಳು ಇಡೀ ಜಗತ್ತಿಗೇ ತಿಳಿದಿದೆ. ಕಾಂಗ್ರೇಸ್ ಎಲ್ಲಾ ಕಡೆ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಇದಕ್ಕೆ ಪಂಜಾಬ್ ಇದಕ್ಕೆ ಸೂಕ್ತ ಉದಾಹರಣೆ. ದೇಶದಲ್ಲಿ ಎರಡು ರಾಜ್ಯದಲ್ಲಿ ಕಾಂಗ್ರೆಸ್ ಬಿಟ್ಟರೆ ಇನ್ನು ಯಾವ ಕಡೆಯಲ್ಲೂ ಮೇಲೆ ಮೇಲೆ ಬರುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.