ಬೆಳ್ತಂಗಡಿ, ಮೇ 23 (DaijiworldNews/HR): ಉಜಿರೆ ಎಸ್ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ( 66 ವ) ಅವರು ಸಿಂಗಪುರದಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಡಾ. ಯಶೋವರ್ಮ ಅವರು ಅನಾರೋಗ್ಯದ ಕಾರಣದಿಂದಾಗಿ ಸಿಂಗಪುರ ದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇನ್ನು ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಅನೇಕ ವರ್ಷ ಅವರು ಸೇವೆ ಸಲ್ಲಿಸಿದ್ದ ಅವರು, ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಬಂಧು ವರ್ಗ, ಕುಟುಂಬಸ್ಥರನ್ನು ಆಗಲಿದ್ದಾರೆ.