ಪುತ್ತೂರು,ಮೇ 23 (DaijiworldNews/HR): ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪೇರಮೊಗ್ರು ಎಂಬಲ್ಲಿ ಗಾಂಜಾ ಸರಬರಾಜುದಾರ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಬಂಧಿತ ಆರೋಪಿಯನ್ನು ವಿಟ್ಲ ಕುಂಡಡ್ಕ ನಿವಾಸಿ ಮಹಮ್ಮದ್ ಮುವಾಝ್(30) ಎಂದು ಗುರುತಿಸಲಾಗಿದೆ.
ಬಂಧಿತನಿಂದ ಪಿಸ್ತೂಲ್, ಸಜೀವ ಗುಂಡು, ಕಾರು, ಗಾಂಜಾ ಸೇರಿದಂತೆ ಸುಮಾರು ರೂ. 5.86 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ಇನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ರೈಲ್ವೇ ಹಳಿಯ ಸಮೀಪ ಗಾಂಜಾವನ್ನು ಹಿಡಿದುಕೊಂಡಿದ್ದ ಶಫೀಕ್ ಕೆ.ವಿ (24) , ರಾಝೀಕ್ (28 ) ರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಆರೋಪಿಗಳು ತಮಗೆ ಗಾಂಜಾ ಸರಬರಾಜು ಮಾಡಿದವನ ಹೆಸರನ್ನು ಹೇಳಿದ್ದು, ಅದರಂತೆ ಮಹಮ್ಮದ್ ಮುವಾಝ್ ನನ್ನು ಪೊಲೀಸರು ಬಂಧಿಸಿದ್ದಾರೆ.