ಕುಂದಾಪುರ, ಜೂ 30 (DaijiworldNews/MS): ಗದ್ದೆಯಲ್ಲಿ ಉಳುಮೆ ಕೆಲಸದಲ್ಲಿ ತೊಡಗಿದ್ದಾಗಲೇ ವ್ಯಕ್ತಿಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ಜೂ ೨೯ ರ ಬುಧವಾರ ನಡೆದಿದೆ.
ಮೃತರನ್ನು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹಳೆ ಹರಲಿಪುರ ಗ್ರಾಮದ ನಿವಾಸಿ, ಪ್ರಸಕ್ತ ಕುಂದಾಪುರ ವಂಡ್ಸೆಯಲ್ಲಿ ವಾಸವಿದ್ದ ಕಾಂತುರಾಜು (40) ಎಂದು ಗುರುತಿಸಲಾಗಿದೆ.
ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ಸ್ಥಳೀಯ ನಿವಾಸಿಯೊಬ್ಬರು ಕೃಷಿ ಮಾಡಲು ಗದ್ದೆಯನ್ನು ಗೇಣಿಗೆ ಪಡೆದುಕೊಂಡು ಗದ್ದೆ ಉಳುಮೆ ಮಾಡಲು ಬೆಳ್ಳಾಲದವರೊಬ್ಬರಿಂದ ಟ್ರಾಕ್ಟರ್ನ್ನು ಪಡೆದಿದ್ದರು. ಬುಧವಾರ ಅದರ ಚಾಲಕ ಕಾಂತುರಾಜು ಟ್ರಾಕ್ಟರ್ ನಿಂದ ಗದ್ದೆ ಉಳುಮೆ ಮಾಡುತ್ತಿದ್ದರು. ಈ ವೇಳೆ ಅವರೊಂದಿಗೆ ಇತರ ನಾಲ್ಕೈದು ಮಂದಿ ಅವರ ಜೊತೆಗೆ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.
ಮಧ್ನಾಹ್ನ ಊಟದ ಸಮಯ ಕಾಂತರಾಜು ರವರು ಟ್ರಾಕ್ಟರ್ನ್ನು ನಿಲ್ಲಿಸಿ ಗದ್ದೆಯಲ್ಲಿ ನಡೆದು ಕೊಂಡು ಹೋಗುತ್ತಿದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಇವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಮೃತ ಕಾಂತುರಾಜು ರವರು ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿದಾಗ ಕುಸಿದು ಬಿದ್ದು ಹೃದಯ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿರಬಹುದಾಗಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.