ಉಡುಪಿ, ಜೂ 30 (DaijiworldNews/DB): ಕಾಪು ತಾಲೂಕಿನ ಮಡಂಬು ಎಂಬಲ್ಲಿ ಯುವತಿಯೊಬ್ಬಳು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಡುಂಬು ಗೋಪಾಲ್ ಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಮೃತ ಯುವತಿ. ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಊರಿಗೆ ಬಂದ್ದ ಶರ್ಮಿಳಾ ಮನೆ ಸಮೀಪದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದರು.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.