ಮಂಗಳೂರು, ಜೂ 30 (DaijiworldNews/SM): ನಗರದ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಅನ್ಶು ಕುಮಾರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ.
ಉಡುಪಿ ಜಿಲ್ಲೆಯ ಕರಾವಳಿ ಭದ್ರತಾ ವಿಭಾಗದ ಎಸ್ ಪಿ ಯಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.
ಇನ್ನು ಈ ಹಿಂದೆ ನಗರದಲ್ಲಿ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿದ್ದ ಹರಿರಾಂ ಶಂಕರ್ ಅವರನ್ನು ಹಾಸನ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ.