ನವದೆಹಲಿ, ಜು 06(DaijiworldNews/SM): ಕೇಂದ್ರ ಸರ್ಕಾರವು ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರನ್ನು ನಾಮ ನಿರ್ದೇಶನ ಮಾಡಿದೆ.
ಈ ಕುರಿತಂತೆ ತಮ್ಮ ಟ್ವಿಟರ್ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಡಾ. ಡಿ. ವಿರೇಂದ್ರ ಹೆಗ್ಗಡೆಯವರು ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಸೇವೆಯಲ್ಲಿ ಅವರನ್ನು ಮೀರಿಸಲು ಯಾರಿಂದಲೂ ಅಸಾಧ್ಯವಾಗಿದೆ. ನನಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸನ್ನಿಧಿಯಲ್ಲಿ ಪ್ರಾರ್ಥಿಸುವ ಅವಕಾಶ ಲಭ್ಯವಾಗಿದೆ. ಸಾಮಾಜಿಕ, ಧಾರ್ಮಿಕ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ನೀಡಿರುವ ಸೇವೆ ಅಪಾರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.