ಬಂಟ್ವಾಳ, ಜು 07 (DaijiworldNews/HR): ಕಾಲು ಜಾರಿ ಬಿದ್ದಿರುವ ಅತ್ತೆಗೆ ಚಿಕಿತ್ಸೆ ಕೊಡಿಸದೇ ಮನೆಯ ಶೌಚಗೃಹದಲ್ಲಿ ಹಾಕಿ ಸರಿಯಾಗಿ ಊಟ ಕೊಡದೇ ಶಿಕ್ಷೆ ನೀಡುತ್ತಿದ್ದ ಸುದ್ದಿ ತಿಳಿದು ಹಿರಿಯ ನಾಗರಿಕ ಸಮಿತಿ ಗಿರಿಜಾ(70) ಎಂಬವರನ್ನು ಶೌಚಗೃಹದಿಂದ ಹೊರಗೆ ಕರೆತಂದು ಉಪಚರಿಸಿ ನಂತರ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ ನಡೆದಿದೆ.
ಮಗನಾದ ಹರಿರಾಂ ಮತ್ತು ಸೊಸೆ ಪೂಜಾ ಎಂಬವರ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಗಿರಿಜಾ ದೂರು ನೀಡಿದ್ದು, ಮನೆಯ ಜಗುಲಿಯಲ್ಲಿ ಕಾಲು ಜಾರಿ ಬಿದ್ದು ಗಾಯವಾಗಿದ್ದು ಮಗ ಮತ್ತು ಸೊಸೆ ಚಿಕಿತ್ಸೆ ಕೊಡಿಸದೇ, ಬಿದ್ದು ಉಂಟಾದ ನೋವಿನಿಂದ ನಡೆಯಲು ಸಾಧ್ಯವಾಗದೆ ಹಾಸಿಗೆಯಲ್ಲಿ ಮಲಗುವಂತಾದಾಗ ಯಾವುದೇ ಆರೈಕೆ ಮಾಡದೆ ಶೌಚಗೃಹದಲ್ಲಿ ಹಾಕಿ ಒಂದೇ ಹೊತ್ತು ಊಟ ಮತ್ತು ಚಾ ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಈ ವಿಷಯ ತಿಳಿದ ಹಿರಿಯ ನಾಗರಿಕ ಸಮಿತಿಗೆ ಮಾಹಿತಿ ತಿಳಿದು ಅವರು ಗಿರಿಜಾ ಅವರನ್ನು ಶೌಚಗೃಹದಿಂದ ಹೊರಗೆ ಕರೆತಂದು ಉಪಚರಿಸಿ ನಂತರ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.