ನವದೆಹಲಿ, ಏ.14 (DaijiworldNews/HR): "ಜೂನ್ವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಒತ್ತಡದಲ್ಲಿರಿಸುವುದು ಸರಿಯಲ್ಲ" ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಈ ಕುರಿತು ಬಿಎಸ್ಇ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, " ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿದಂತೆ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಕೂಡ ರದ್ದುಗೊಳಿಸಬೇಕು. ಈಗ ಪಿಯುಸಿ ವಿದ್ಯಾರ್ಥಿಗಳ ಪರೀಕ್ಚೆಯನ್ನು ಜೂನ್ ಗೆ ಮುಂದೂಡಲಾಗಿದೆ. ಅಲ್ಲಿ ತನಕ ಪಿಯುಸಿ ವಿದ್ಯಾರ್ಥಿಗಳನ್ನು ಒತ್ತಡದಲ್ಲಿರಿಸುವುದು ಸರಿಯಲ್ಲ" ಎಂದು ಅವರು ಹೇಳಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಮತ್ತು ಜೂನ್ 1 ರ ನಂತರ ಪರಿಸ್ಥಿತಿಯ ಪರಿಶೀಲನೆ ನಡೆಸಲಾಗುವುದು. ಪರೀಕ್ಷೆಗಳನ್ನು ನಡೆಸುವ ಕನಿಷ್ಠ 15 ದಿನಗಳ ಮೊದಲು ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗುವುದು ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.