ಬೆಂಗಳೂರು, ಏ.15 (DaijiworldNews/MB) : ಸಾರ್ವಜನಿಕರು ನಿರಾತಂಕವಾಗಿ ಲಸಿಕೆ ಪಡೆಯುತ್ತಿದ್ದಾರೆ. ಲಸಿಕೆ ಇಲ್ಲದೆ ಜನರು ಹಿಂತಿರುಗಿದ ಒಂದೇ ಒಂದು ಉದಾಹರಣೆ ಎಲ್ಲೂ ದಾಖಲಾಗಿಲ್ಲ ಎಂದು ಬಿಜೆಪಿ ವಾಗ್ದಾಳಿ ಹೇಳಿದೆ.
''ವಾಸ್ತವದಲ್ಲಿ ರಾಜ್ಯದಲ್ಲಿ ಲಸಿಕೆಗಳಿಗೆ ತೀವ್ರ ಕೊರತೆ ಉಂಟಾಗಿದೆ, ಆದರೆ ಬಿಜೆಪಿ ಸರ್ಕಾರ "ಲಸಿಕೆ ಉತ್ಸವ" ಎನ್ನುವ ಸುಳ್ಳುಗಳ ಭ್ರಮೆಯ ಉತ್ಸವ ನಡೆಸುತ್ತಿದೆ. ಜನರ ಮರಣದಲ್ಲೂ ಮಹೋತ್ಸವ ಆಚರಿಸಲು ಬಿಜೆಪಿಯಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ ಮಾತ್ರ ಸಾಧ್ಯ. ಪರಿಸ್ಥಿತಿ ಬಿಗಡಾಯಿಸುತ್ತಿದ್ದರೂ ಸೋಂಕಿತಸರ್ಕಾರಕ್ಕೆ ಇನ್ನೂ ಗಾಂಭೀರ್ಯತೆ ಬಂದಿಲ್ಲ'' ಎಂದು ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿತ್ತು.
ಈ ಟ್ವೀಟ್ಗೆ ತಿರುಗೇಟು ನೀಡಿರುವ ಬಿಜೆಪಿ, ''ಸಾರ್ವಜನಿಕರು ನಿರಾತಂಕವಾಗಿ ಲಸಿಕೆ ಪಡೆಯುತ್ತಿದ್ದಾರೆ. ಲಸಿಕೆ ಇಲ್ಲದೆ ಜನರು ಹಿಂತಿರುಗಿದ ಒಂದೇ ಒಂದು ಉದಾಹರಣೆ ಎಲ್ಲೂ ದಾಖಲಾಗಿಲ್ಲ. ಲಸಿಕೆ ಪಡೆದುಕೊಳ್ಳಿ ಎಂದು ಜನರಲ್ಲಿ ಧನಾತ್ಮಕ ಚಿಂತನೆ ತುಂಬಬೇಕಾಗಿದ್ದ ಕಾಂಗ್ರೆಸ್ ಸುಳ್ಳಿನ ಮೂಲಕ ಜನರನ್ನು ಗೊಂದಲಕ್ಕೀಡು ಮಾಡುತ್ತಿದೆ. ನಿಮ್ಮ ಸುಳ್ಳುಗಳಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ'' ಎಂದು ಎಚ್ಚರಿಕೆ ನೀಡಿದೆ.