ಲಕ್ನೋ, ಎ.15 (DaijiworldNews/PY): "ಕೊರೊನಾ ಸೋಂಕು ಪ್ರಕರಣಗಳು ಹೆಚ್ಚು ದಾಖಲಾಗುತ್ತಿರುವ ಜಿಲ್ಲೆಗಳಲ್ಲಿ ನಿರ್ಬಂಧ ಇನ್ನಷ್ಟು ಕಠಿಣಗೊಳಿಸಲು ಉತ್ತರಪ್ರದೇಶ ಸರ್ಕಾರ ತೀರ್ಮಾನ ಮಾಡಿದೆ" ಎಂದು ವರದಿ ತಿಳಿಸಿದೆ.
ಸಾಂದರ್ಭಿಕ ಚಿತ್ರ
"ನೋಯ್ಡಾ ಹಾಗೂ ಲಕ್ನೋ ನಗರಗಳಲ್ಲಿ ರಾತ್ರಿ ಕರ್ಫ್ಯೂ ಅವಧಿಯನ್ನು ವಿಸ್ತರಿಸುವಂತೆ ಆದೇಶ ನೀಡಿದ್ದು, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ" ಎಂದು ಹೇಳಿದೆ.
ಮೇ 15ರವರೆಗೆ ಎಲ್ಲಾ ಶಾಲೆಗಳನ್ನು ಬಂದ್ ಮಾಡಲು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.
ನೋಯ್ಡಾ, ಲಕ್ನೋ ಸೇರಿದಂತೆ ಈಗಾಗಲೇ ಕಾನ್ಪುರ್, ಪ್ರಯಾಗ್ ರಾಜ್, ವಾರಣಾಸಿ, ಗಾಜಿಯಾಬಾದ್ ಹಾಗೂ ಮೀರತ್ನಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಗಿದೆ. ಗುರುವಾರ ರಾತ್ರಿ 8ರಿಂದ ಬೆಳಗ್ಗೆ 7ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಹೇಳಿದೆ. ಈ ಮೊದಲು ರಾತ್ರಿ ಕರ್ಫ್ಯೂ ಅನ್ನು ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಜಾರಿಗೊಳಿಸಲಾಗಿತ್ತು.
"ಈ ಎಲ್ಲಾ ಜಿಲ್ಲೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಠಿಣ ನಿರ್ಬಂಧ ವಿಧಿಸಲಾಗುತ್ತಇದೆ" ಎಂದು ಯುಪಿ ಸರ್ಕಾರ ತಿಳಿಸಿದೆ.