ನೆಲ್ಲೂರು, ಮೇ.11 (DaijiworldNews/PY): ನೆಲ್ಲೂರಿನ ವಂಜಮೂರಿನ ವೆಂಕಟನಾರಾಯಣ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾದ ಹಿನ್ನೆಲೆ ಮೂರು ಕಾರ್ಮಿಕರು ಮೃತಪಟ್ಟು, ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ವಿ. ಜಾಮೂರ್ನ ಶರೀಫ್, ಪಿ.ಸ್ರೀನು ಹಾಗೂ ಚೌತಾ ಭೀಮವರಂನ ತಿರುಪಟಯ್ಯ ಎಂದು ಗುರುತಿಸಲಾಗಿದೆ. ಘಟನೆ ನಡೆದ ತಕ್ಷಣವೇ ಮೃತರನ್ನು ನೆಲ್ಲೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ಅದೇ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿ, ಮೂರು ಗಾಯಗೊಂಡಿದ್ದರು.