ಭೋಪಾಲ್, ಮೇ.18 (DaijiworldNews/PY): ನವಜಾತ ಶಿಶುವಿನ ಕಾಲುಗಳನ್ನು ಇಲಿಗಳು ಕಚ್ಚಿತಿಂದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಘಟನೆಗೆ ಆಸ್ಪತ್ರೆ ಸಿಬ್ಬಂದಿಗ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದ್ದು, ಆಸ್ಪತ್ರೆಯ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದೆ.
"ಸರ್ಕಾರದ ಅಧೀನದಲ್ಲಿರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಕಾಲುಗಳನ್ನು ಇಲಿಗಳು ಕಚ್ಚಿತಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ" ಎಂದು ಆಸ್ಪತ್ರೆಯ ಅಧೀಕ್ಷಕ ಡಾ. ಪ್ರಮೇಂದ್ರ ಠಾಕೂರ್ ತಿಳಿಸಿದ್ದಾರೆ.
"ತನಿಖೆ ನಡೆಸಲು ಇಬ್ಬರು ವೈದ್ಯರು ಹಾಗೂ ಆಡಳಿತ ಅಧಿಕಾರಿಗಳನ್ನೊಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.