ಬೆಂಗಳೂರು, ಆ 25 (DaijiworldNews/PY): ಶಾಲಾ-ಕಾಲೇಜುಗಳಿಗೆ ದೂರದ ಸ್ಥಳಗಳಿಂದ ತೆರಳುವ ಮಕ್ಕಳು ಸರಿಯಾದ ಸಮಯಕ್ಕೆ ತಲುಪುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಭಾಗಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸಲಿವೆ. ಈ ಕುರಿತು ಸಂಬಂಧಪಟ್ಟ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
"9ನೇ ಹಾಗೂ 10ನೇ ತರಗತಿಗಳು, ಪಿಯುಸಿ ತರಗತಿಗಳು ಆರಂಭವಾಗಿದ್ದು, ಹಾಜರಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ರಾಜ್ಯದ ಹಲವು ಭಾಗಗಳಲ್ಲಿ ಶಾಲಾ ಸಮಯಕ್ಕೆ ಬಸ್ಗಳ ಸಂಚರಿಸುವುದು ಅವಶ್ಯಕ. ಕೊರೊನಾ ಲಾಕ್ಡೌನ್ ಪೂರ್ವದಲ್ಲಿ ಶಾಲಾ ಅವಧಿಗೆ ಸರಿಯಾಗಿ ಮಕ್ಕಳು ತಲುಪುವಂತೆ ಬಸ್ಗಳು ಸಂಚರಿಸುತ್ತಿದ್ದವು. ಈಗ ಅದೇ ರೀತಿಯಾಗಿ ಬಸ್ಗಳು ಸಂಚರಿಸುವುದು ಅಗತ್ಯ" ಎಂದಿದ್ದಾರೆ.
"ಶಾಲಾ ಸಮಯಕ್ಕೆ ಸರಿಯಾಗಿ ಬಸ್ಗಳು ಸಂಚರಿಸಿದರೆ ಮಕ್ಕಳ ಹಾಜರಾತಿ ಮತ್ತಷ್ಟು ಹೆಚ್ಚಳವಾಗುತ್ತದೆ. ಬಸ್ಗಳಲ್ಲಿ ಸಂಚರಿಸುವ ಮಕ್ಕಳ ಕೊರೊನಾ ಸುರಕ್ಷಿತಾ ಕ್ರಮಗಳನ್ನು ಕಡ್ಡಾಯ ಪಾಲಿಸಬೇಕು. ಕೊರೊನಾ ಸುರಕ್ಷಿತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ವಾಹಕರು ಸಲಹೆ, ಸೂಚನೆಗಳನ್ನು ನೀಡಬೇಕು" ಎಂದು ತಿಳಿಸಿದ್ದಾರೆ.