ಬೆಂಗಳೂರು, ಸೆ. 04 (DaijiworldNews/PY): ಎರಡು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಹೆಚ್ಎಎಲ್ ಬಳಿಯ ನಾರಾಯಣರೆಡ್ಡಿ ಲೇಔಟ್ನಲ್ಲಿ ನಡೆದಿದೆ.
ಮನೆ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಮಗುವಿನ ಕುತ್ತಿಗೆ, ತೊಡೆ, ಕಿವಿ ಭಾಗಕ್ಕೆ ಗಾಯವಾಗಿದ್ದು, ಮಗು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಮಗುವಿನ ಪೋಷಕರು ಬಿಬಿಎಂಪಿ ಅಧಿಕಾರಿಗಳ ವಿರುದ್ದ ದೂರು ನೀಡಿದ್ದು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಎಫ್ಐಆರ್ ದಾಖಲಿಸಲಾಗಿದೆ.
ಮಹಾದೇವಪುರ ವಲಯ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲಾಗಿದ್ದು, ಇಲ್ಲಿಯವರೆಗೆ ಯಾವುದೇ ಬಿಬಿಎಂಪಿ ಅಧಿಕಾರಿಗಳಿಗೂ ನೋಟಿಸ್ ನೀಡಿಲ್ಲ. ಹೆಚ್ಎಎಲ್ ಪೊಲೀಸರು ಘಟನೆಯ ಕುರಿತು ವಿಚಾರಣೆ ಕೂಡಾ ನಡೆಸಿಲ್ಲ ಎನ್ನಲಾಗಿದೆ.