ಬೆಂಗಳೂರು, ಅ 11 (DaijiworldNews/MS): 'ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಉಳಿಯಲು ಬಯಸುತ್ತಾರೆ ಮತ್ತು ಮದುವೆಯ ನಂತರವೂ ಅವರು ಮಕ್ಕಳಿಗೆ ಜನ್ಮ ನೀಡಲು ಬಯಸುವುದಿಲ್ಲ. ಬಾಡಿಗೆ ತಾಯ್ತನವನ್ನು ಆರಿಸಿಕೊಳ್ಳುತ್ತಿದ್ದಾರೆ" ಎಂಬ ಸಚಿವ ಸುಧಾಕರ್ ಅವರ ಹೇಳಿಕೆಗೆ ಕಾಂಗ್ರೆಸ್ ಪಕ್ಷಕ್ಕೆ ಕಿಡಿಕಾರಿದ್ದು, "ಮದುವೆಯಾದರೂ 'ಸಿಂಗಲ್' ಆಗಿರುವ ಮೋದಿಯವರಿಗೆ ನಬಗ್ಗೆಯೂ ಹೀಗೆ ಹೇಳುವ ಧೈರ್ಯವಿದೆಯೇ?! " ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ " ಆಧುನಿಕ ಮಹಿಳೆಯರು ವಿವಾಹವಾಗಲು, ಮಕ್ಕಳನ್ನು ಹೆರಲು ನಿರಾಕರಿಸುತ್ತಿದ್ದಾರೆ ಎಂದುರುವ ಸಚಿವ ಸುಧಾಕರ್ ಅವರೇ, ಮದುವೆಯಾದರೂ 'ಸಿಂಗಲ್' ಆಗಿರುವ ಮೋದಿಯವರಿಗೆ ನಬಗ್ಗೆಯೂ ಹೀಗೆ ಹೇಳುವ ಧೈರ್ಯವಿದೆಯೇ?! ಮಹಿಳೆಯರ ಬದುಕನ್ನ ನಿರ್ಧರಿಸುವ, ಅವರ ಆಯ್ಕೆಯನ್ನು ನಿಯಂತ್ರಿಸುವ, ಅವರ ಸ್ವತಂತ್ರ ಪ್ರಶ್ನಿಸುವ ಬಿಜೆಪಿಗೂ ತಾಲಿಬಾನ್ಗೂ ವ್ಯತ್ಯಾಸವಿಲ್ಲ" ಎಂದು ಟೀಕಿಸಿದೆ.
ಮಹಿಳೆಯರ ಬಗ್ಗೆ ಸಚಿವ ಸುಧಾಕರ್ ಆಡಿದ ಮಾತು ಮಹಿಳಾ ಸ್ವಾತಂತ್ರವನ್ನು ಅಣಕಿಸುವಂತಿದೆ, ಸುಧಾಕರ್ ಅವರೇ, ಮಹಿಳೆಯರ ಬದುಕಿನ ಆಯ್ಕೆಯನ್ನು ನಿರ್ಧರಿಸಲು ನೀವು ಯಾರು? ಪುರುಷ ಯಜಮಾನಿಕೆಯನ್ನು ಮುಂದುವರೆಸುವ ಹವಣಿಕೆ ನಿಮಗೇಕೆ? ಮನುವಾದವನ್ನು ನಂಬಿದ ಬಿಜೆಪಿಯ ಮಹಿಳಾ ವಿರೋಧಿ ಕುತಂತ್ರಗಳು ಅವರ ಮಾತುಗಳಲ್ಲಿಯೇ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದೆ.