ನಾಗಪುರ, ನ. 27 (DaijiworldNews/HR): ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ 'ಗೋ ಏರ್' ವಿಮಾನದಲ್ಲಿ ಎಂಜಿನ್ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಸಾಂದರ್ಭಿಕ ಚಿತ್ರ
'ಗೋ ಏರ್' ವಿಮಾನದ ಪೈಲಟ್ ನಾಗಪುರ ಎಟಿಸಿಯನ್ನು ಸಂಪರ್ಕಿಸಿ ವಿಮಾನದ ಎಂಜಿನ್ನಲ್ಲಿ ಸಮಸ್ಯೆ ಇದೆ ಎಂದು ತಿಳಿಸಿದ್ದು, ನಾಗಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಇನ್ನು ಈ ವಿಮಾನದಲ್ಲಿ ಸಿಬ್ಬಂದಿಯನ್ನು ಹೊರತುಪಡಿಸಿ 139 ಪ್ರಯಾಣಿಕರು ವಿಮಾನದಲ್ಲಿದ್ದು, ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪ್ರಯಾಣಿಕರು 'ಗೋ ಏರ್' ಟರ್ಮಿನಲ್ನಲ್ಲಿ ಇದ್ದಾರೆ. ಅವರಿಗೆ ಮುಂದಿನ ವ್ಯವಸ್ಥೆಗಳನ್ನು ಮಾಡಲಾಗುತ್ತದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಅಬಿದ್ ರೂಹಿ ತಿಳಿಸಿದ್ದಾರೆ.