ಪಂಜಾಬ್, ಜ 16 (DaijiworldNews/MS): ಗುರು ರವಿದಾಸ್ ಜಯಂತಿ ಗಮನದಲ್ಲಿರಿಸಿ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಮತ್ತು ಇತರ ರಾಜಕೀಯ ಪಕ್ಷಗಳು ಚುನಾವಣೆಯನ್ನು ಮುಂದೂಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ನಡೆಯಲಿದ್ದ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ಪ್ರಕಟನೆಯಲ್ಲಿ ತಿಳಿಸಿದೆ.
ಗುರು ರವಿದಾಸ್ ಅವರ ಜನ್ಮ ದಿನಾಚರಣೆಯ ಸಂದರ್ಭ, ಪರಿಶಿಷ್ಟ ಜಾತಿ ಸಮುದಾಯವು (ಸುಮಾರು 20 ಲಕ್ಷ ಮಂದಿ) ಫೆ. 10ರಿಂದ 16ರವರೆಗಿನ ಅವಧಿಯಲ್ಲಿ ಉತ್ತರ ಪ್ರದೇಶದ ಬನಾರಸ್ಗೆ ಭೇಟಿ ನೀಡುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಯಲ್ಲಿ, ಈ ಸಮುದಾಯದ ಅನೇಕ ಜನರು ರಾಜ್ಯ ವಿಧಾನಸಭೆಗೆ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ ಹೀಗಾಗಿ ಅವರಿಗೂ ಮತದಾನದ ಅವಕಾಶ ಕಲ್ಪಿಸುವ ಸಲುವಾಗಿ ಚುನಾವಣೆಯನ್ನು ಮುಂದೂಡಬೇಕು ಎಂದು ಜನವರಿ 13 ರಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.
ಎಲ್ಲಾ ಸಂಗತಿಗಳನ್ನು ಪರಿಗಣಿಸಿದ ನಂತರ, ಚುನಾವಣಾ ಆಯೋಗವು ಪಂಜಾಬ್ ರಾಜ್ಯದ ವಿಧಾನಸಭೆಗೆ 2022 ರ ಸಾರ್ವತ್ರಿಕ ಚುನಾವಣೆಗಳನ್ನು ಫೆಬ್ರವರಿ 20 ಕರಂದು ಮಾಡಲು ತೀರ್ಮಾನಿಸಿದೆ